ಬಿಜೆಪಿ, ಸಂಘ ಪರಿವಾರದ ವಿರೋಧದ ಮಧ್ಯೆಯೂ ಟಿಕೆಟ್ ಗಿಟ್ಟಿಸಿದ ಶೆಟ್ಟರ್!

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಂಘ ಪರಿವಾರ ಮತ್ತು ಬಿಜೆಪಿಯ ಸ್ಥಳೀಯ ಮುಖಂಡರು, ಕಾರ್ಯಕರ್ತರ ತೀವ್ರ ವಿರೋಧದ ಮಧ್ಯೆಯೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೆಸರನ್ನು ಬಿಜೆಪಿ ಘೋಷಣೆ ಮಾಡಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ಗೆ ಜಿಗಿದು, ಹುಬ್ಬಳ್ಳಿಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ್ದ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರಿ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊರಗಿನವರಿಗೆ ಯಾವುದೇ ಕಾರಣದಿಂದ ಟಿಕೆಟ್ ನೀಡಬಾರದು, … Continue reading ಬಿಜೆಪಿ, ಸಂಘ ಪರಿವಾರದ ವಿರೋಧದ ಮಧ್ಯೆಯೂ ಟಿಕೆಟ್ ಗಿಟ್ಟಿಸಿದ ಶೆಟ್ಟರ್!