*ಆಕೆಯೇ ಬೇಕೆಂದು ಕಾಡಿ ಬೇಡಿ ವಿವಾಹವಾದ: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಗೆ ಹಿಂಸಿಸುತ್ತಿದ ಪತಿ: ಮದುವೆಯಾದ ವರ್ಷದೊಳಗೆ ನವವಿವಾಹಿತೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮದುವೆಯಾದ ವರ್ಷದೊಳಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ಈ ಘಟನೆ ನಡೆದಿದೆ. ಮೊದಲ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೇ 15ಕ್ಕೆ ಮದುವೆಯ ವಾರ್ಷಿಕೋತ್ಸವವಾಗಿತ್ತು. ಆದರೆ ಅದಕ್ಕೂ ಮೊದಲೇ ನವವಿವಾಹಿತೆ ಸಾವಿಗೆ ಶರಣಾಗಿದ್ದಾಳೆ. ಪ್ರೇಮಾ ಆತ್ಮಹತ್ಯೆ ಮಾಡಿಕೊಂಡವರು. ಗೌರಿಬಿದನೂರು ಮೂಲದ ಶಕುಂತಲಾ ಎಂಬುವರ ಪುತ್ರಿ ಪ್ರೇಮಾ ಹಾಗೂ ಶಿಡ್ಲಘಟ್ಟದ ಜಂಗಮಕೋಟೆಯ ಶಿವಕುಮಾರ್ ಪರಸ್ಪರ ಸಂಬಂಧಿಕರು. ಪ್ರೇಮಾಳನ್ನು ಶಿವಕುಮಾರ್ ಕಾಡಿ … Continue reading *ಆಕೆಯೇ ಬೇಕೆಂದು ಕಾಡಿ ಬೇಡಿ ವಿವಾಹವಾದ: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಗೆ ಹಿಂಸಿಸುತ್ತಿದ ಪತಿ: ಮದುವೆಯಾದ ವರ್ಷದೊಳಗೆ ನವವಿವಾಹಿತೆ ಆತ್ಮಹತ್ಯೆ*