Election NewsPolitics

*ಶಿಗ್ಗಾಂವಿ ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿ*

ಪ್ರಗತಿವಾಹಿನಿ ಸುದ್ದಿ: ಶಿಗ್ಗಾಂವಿ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿ ಮನವೊಲಿಸುವಲ್ಲಿ ಸಿಎಂ ಸಿದದ್ರಾಮಯ್ಯ ಯಶಸ್ವಿಯಾಗಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಜ್ಜಂಪೀರ್ ಖಾದ್ರಿ ಅವರಿಗೆ ಶಿಗ್ಗಾಂವಿ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಸಿಎಂ ಸೂಚಿಸಿದ್ದಾರೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು. ಬಿಜೆಪಿ ಅಭ್ಯರ್ಥಿ ಸೋಲಬೇಕು. ಯಾಸೀರ್ ಪರ ಪ್ರಚಾರ ಮಾಡುವಂತೆ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯಲು ಒಪ್ಪಿದ್ದಾರೆ. ಈ ವೇಳೆಸಚಿವ ಜಮೀರ್ ಅಹ್ಮದ್ ಉಪಸ್ಥಿತರಿದ್ದರು.

Related Articles

Back to top button