Latest

ಇಬ್ಬರು ಅಡಿಕೆ ಕಳ್ಳರ ಬಂಧನ

ಪ್ರಗತಿವಾಹಿನಿ ಸುದ್ದಿ; ಶಿರಸಿ: ಅಡಿಕೆ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಬನವಾಸಿ ಪೊಲಿಸರು ಬಂಧಿಸಿದ್ದಾರೆ.

ಬಂಧಿತರನ್ನು 22 ವರ್ಷದ ಆದಿತ್ಯಾ ಗೋಪಾಲಕೃಷ್ಣ ನಾಯ್ಕ ಹಾಗೂ 24 ವರ್ಷದ ಕಾರ್ತಿಕ ಸತೀಶ ರೇವಣಕರ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದುವರೆ ಕ್ವಿಂಟಾಲ್ ಅಡಿಕೆ ಹಾಗೂ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.

ಸುಮಾರು ಒಂದುವರೆ ಕ್ವಿಂಟಾಲ್ ನಷ್ಟು ಅಡಿಕೆ ಕಳ್ಳತನವಾದ ಬಗ್ಗೆ ಬನವಾಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಉತ್ತರ ಕನ್ನಡ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಡಾ ಸುಮನ್ ಡಿ ಪನ್ನೇಕರ್,ಉತ್ತರ ಕನ್ನಡ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಬದ್ರಿನಾಥ ಎಸ್, ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ರವಿ ಡಿ ನಾಯ್ಕ, ಶಿರಸಿ ವೃತ್ತ ಸಿ.ಪಿ.ಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಬನವಾಸಿ ಪೊಲೀಸ್ ಠಾಣೆ ಪಿ.ಎಸ್.ಐ ಹಣಮಂತ ಬಿರಾದಾರ ರವರ ನೇತೃತ್ವದಲ್ಲಿ ಬನವಾಸಿ ಪೊಲೀಸ್
ಠಾಣೆಯ ಸಿಬ್ಬಂದಿಯವರಾದ ಸಿ.ಪಿ.ಸಿ ಶಿವರಾಜ ಎಸ್, ಸಿ.ಪಿ.ಸಿ ಮಂಜುನಾಥ ಬಿ. ಸಿ.ಪಿ.ಸಿ ಚರಣ ಎನ್ ನಾಯ್ಕ, ಸಿ.ಪಿ.ಸಿ ಮಂಜುನಾಥ ಡಿ.ಎನ್ ಹಾಗೂ ಶಿರಸಿ ಶಹರ ಪೊಲೀಸ್ ಠಾಣೆಯ ಸಿ.ಎಚ್.ಸಿ ಪ್ರಶಾಂತ ಪಾವಸ್ಕರವರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಐವರ ಪೈಕಿ ನಾಲ್ವರು ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button