Kannada NewsKarnataka NewsLatest

*ಸಾರ್ವಜನಿಕರ ಗಮನಕ್ಕೆ; ಮೇ 27ರಂದು ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಹಿನ್ನೆಲೆಯಲ್ಲಿ ಮೇ 27ರಂದು ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆಯಾಗಲಿದೆ ಎಂದು ಬೆಳಗಾವಿ ನಗರ ಪೊಲಿಸರು ಮಾಹಿತಿ ನೀಡಿದ್ದಾರೆ.

ನರಗುಂದಕರ ಭಾವೆ ಚೌಕದಿಂದ ಆರಂಭವಾಗುವ ಮೆರವಣಿಗೆ ಮಾರುತಿ ಗಲ್ಲಿ, ಹುತಾತ್ಮ ಚೌಕ, ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಕಾಲೇಜು ರಸೆ, ಶ್ರೀ ಧರ್ಮವೀರ ಸಂಭಾಜಿ ವೃತ್ತ, ರಾಮಲಿಂಗಖಿಂಡಗಲ್ಲಿ ರಸ್ತೆ, ಸಾಮ್ರಾಟ ಅಶೋಕ ಚೌಕ, ಟಿಳಕ ಚೌಕ, ಹೇಮುಕಲಾನಿ ಚೌಕ, ಶನಿ ಮಂದಿರ, ಕಪಿಲೇಶ್ವರ ಪ್ಲೈ ಓವರ್ ಮೂಲಕ ಕಪಿಲೇಶ್ವರ ಮಂದಿರದ ಬಳಿ ಮುಕ್ತಾಯಗೊಳ್ಳಲಿದೆ.

Home add -Advt

ಮಧ್ಯಾಹ್ನ 2 ಗಂಟೆಯಿಂದ ಮೆರವಣಿಗೆ ಮುಕ್ತಾಯದವರೆಗೆ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು, ಪರ್ಯಾಯ ಮಾರ್ಗ ಬಳಸಿಕೊಳ್ಳಲು ಕೋರಲಾಗಿದೆ.

ವಿವರ ಇಲ್ಲಿದೆ –

https://mail.google.com/mail/u/0?ui=2&ik=8ea932610f&attid=0.1&permmsgid=msg-a:r-2602562578977056903&th=18853a98749c6158&view=att&disp=inline&realattid=18853a966a2fbcf077c1

Related Articles

Back to top button