Latest

*ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಹಾವೇರಿ (ಶಿಗ್ಗಾವಿ): ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ, ಸಾಧಕ, ಹಾಗೂ ಪ್ರೇರಣಾ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಶಿವಾಜಿ ಮಹಾರಾಜರ 396 ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಸಾವಿನ ನಂತರವೂ ಪ್ರಬಲ ಶಕ್ತಿ ಜನಪ್ರಿಯತೆ ಹೊಂದಿರುವವರು ವಿರಳ. ಅಂಥವರನ್ನು ನಾವು ಯುಗಪುರುಷರು ಎನ್ನುತ್ತೇವೆ. ಮಹಾತ್ಮಾ ಗಾಂಧಿ, ಸ್ವಾಮಿ ವಿವೇಕಾನಂದರು, ಸುಭಾಷ್ ಚಂದ್ರ ಬೋಸ್ ಯುಗಪುರುಷರು ಎಂದರು.

ಸಂಸ್ಕೃತಿ ಮರುಸ್ಥಾಪನೆ
ಭಾರತ ದೇಶವನ್ನು ಗುಲಾಮಗಿರಿಗೆ ಒಡ್ಡುವ ಸಂದರ್ಭದಲ್ಲಿ ಪ್ರಬಲ ತಡೆ ಒಡ್ಡಿ ನಮ್ಮ ಸಂಸ್ಕøತಿ, ಪರಂಪರೆಯನ್ನು ಉಳಿಸಿ, ಮರುಸ್ಥಾಪಿಸಿದವರು ಛತ್ರಪತಿ ಶಿವಾಜಿ ಮಹಾರಾಜರು. ಮೊಘಲರ ಆಡಳಿತದ ದಿನಗಳ ಸಂದರ್ಭದಲ್ಲಿ ದಕ್ಷಿಣ ಭಾರತವನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುವ ತೈಮೂರ್ ಷಡ್ಯಂತರಕ್ಕೆ ಅನೇಕ ರಾಜ್ಯಗಳು ವಶವಾಗಿದ್ದವು. ಗುರು ಕೊಂಡೋಜಿ ಹಾಗೂ ತಾಯಿ ಜೀಜಾಬಾಯಿ ಅವರ ಪಾಠದಿಂದ ಧೈರ್ಯ, ಸೌರ್ಯ, ಆತ್ಮಬಲವನ್ನು ಜೋಡಿಸಿ ಶಿವಾಜಿ ಮಹಾರಾಜರು ಗೊರಿಲ್ಲಾ ಯುದ್ಧ ಕಲೆಯಿಂದ ವಿವಿಧ ಪ್ರಾಂತ್ಯಗಳನ್ನು ವಶಪಡಿಸಿಕೊಂಡರು. ಹಿಂದೂ ಸಮಾಜದ ಮೇಲೆ ಅತ್ಯಂತ ನಡೆದ ದಾಳಿಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾದರು. ಅವರು ಚರಿತ್ರೆ ಮಾತ್ರ ಬದಲಾಯಿಸಲಿಲ್ಲ. ಹೊ¸ ಚರಿತ್ರೆಯನ್ನು ರಚಿಸಿದರು. ಚಾರಿತ್ರ್ಯವಂತ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಅವರು ಪ್ರಜೆಗಳನ್ನು ಸುಭಿಕ್ಷವಾಗಿಟ್ಟಿದ್ದರು. ಅಪ್ರತಿಮ ದೇಶಭಕ್ತನ, ಜೀವನಚರಿತ್ರೆಯನ್ನು ಸ್ಮರಿಸಬೇಕು. ಶಿವಾಜಿಯವರ ಕುಲಕ್ಕೆ ಸೇರಿದ ಕ್ಷತ್ರಿಯರು ಅವರ ಜಯಂತಿ ಆಚರಿಸಿರುವುದು ಶ್ಲಾಘನೀಯ ಎಂದರು.

ಕನ್ನಡದ ಮಣ್ಣಿನಲ್ಲಿರುವವರೆಲ್ಲರೂ ಕನ್ನಡಿಗರು
ಕರ್ನಾಟಕದಲ್ಲಿ ಎಲ್ಲಾ ವರ್ಗ, ಭಾಷಿಕರು ಹಾಗೂ ಸಮುದಾಯಗಳನ್ನು ಸಮನಾಗಿ ನೋಡುವ ಪರಂಪರೆ ಮೊದಲಿನಿಂದಲೂ ಬಂದಿದೆ. ಆದರೆ ಕನ್ನಡಿಗರಿಗೆ ಅಗ್ರಸ್ಥಾನ. ಕನ್ನಡದ ಮಣ್ಣಿನಲ್ಲಿರುವವರೆಲ್ಲರೂ ಕನ್ನಡಿಗರು. ಇದು ನಮ್ಮ ಧ್ಯೇಯ, ಎಲ್ಲರನ್ನೂ ಒಳಗೊಳ್ಳುವುದು ನಮ್ಮ ಮೂಲಮಂತ್ರ. ಸಮಾಜದ ಎಲ್ಲಾ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿ ಮುಟ್ಟಬೇಕೆಂಬ ಕಾರಣದಿಂದ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.

ಶ್ರೇಯೋಭಿವೃದ್ಧಿ
ತಾಲ್ಲೂಕಿನಲ್ಲಿ ಈ ಸಮಾಜ ಅತ್ಯಂತ ಗೌರವಯುವವಾಗಿ ಬದುಕು ನಡೆಸಿ, ಎಲ್ಲಾ ವರ್ಗದವರ ಪ್ರೀತಿಯನ್ನು ಗಳಿಸಿಕೊಂಡು, ಮುಖ್ಯವಾಹಿನಿಯಲ್ಲಿ ಸೇರಿಕೊಂಡು ತಾಲ್ಲೂಕಿನ ಶ್ರೇಯೋಭಿವೃದ್ಧಿಗೆ ನಿರಂತವಾಗಿ ಕೈಜೋಡಿಸಿರುವುದು ಶ್ಲಾಘನೀಯ. ಈ ಸಂಬಂಧ ಬಹಳ ಮುಖ್ಯ. ಇಂವ ನಮ್ಮವ ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ. ಮರಾಠಾ ಅಭಿವೃದ್ಧಿ ನಿಗಮದಿಂದ ರೂಪಿಸಿರುವ ಕಾರ್ಯಕ್ರಮಗಳು ತಾಲ್ಲೂಕಿನ ಫಲಾನುಭವಿಗಳಿಗೆ ಮುಕ್ತವಾಗಿ ಮುಟ್ಟಬೇಕು. ಇವುಗಳನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು
ಸಮುದಾಯ ಭವನದಲ್ಲಿ ಸಮಾಜದ ಏಳಿಗೆಗಾಗಿ ಕಾರ್ಯಕ್ರಮಗಳನ್ನು ರೂಪಿಸಿ, ಇತರೆ ಸಮಾಜಗಳನ್ನು ಒಳಗೊಂಡಂತೆ ಕೆಲಸ ಮಾಡಬೇಕು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ದೃಷ್ಟಿಯಿಂದ ಕೆಲಸ ಮಾಡಬೇಕು ಎಂದರು. ಶಿಗ್ಗಾಂವಿ ಸವಣೂರಿನ ಅಭಿವೃದ್ಧಿಗಾಗಿ ನೂರಾರು ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಅನುದಾನ ಒದಗಿಸಲಾಗುವುದು. ಎಲ್ಲಾ ಸಮಾಜಗಳ ಬೇಡಿಕೆಗಳನ್ನು ಈಡೇರಿಸಲು ಎಲ್ಲಾ ಕ್ರಮ ಜರುಗಿಸಲಾಗುವುದು ಎಂದರು.

ದೂರದೃಷ್ಟಿಯ ಆಯವ್ಯಯ
ಈ ಬಾರಿಯ ಬಜೆಟ್ ನಲ್ಲಿ ರೈತರಿಗಾಗಿ ಕಾರ್ಯಕ್ರಮಗಳನ್ನು ನೀಡಲಾಗಿದೆ. ಸಾಲದ ವಿಸ್ತರಣೆ, ರೈತರಿಗೆ ಪ್ರಥಮ ಬಾರಿ ಜೀವನಜ್ಯೋತಿ ಜೀವ ವಿಮೆ, 10 ಕೋಟಿ ರೂ.ಗಳ ಕಂತು ಸರ್ಕಾರವೇ ನೀಡಲಿದೆ. ಯಶಸ್ವಿನಿ ಯೋಜನೆ ಮರುಪ್ರಾರಂಭ, ಬೆಲೆ ಕುಸಿತವಾದಾಗ ರೈತರಿಗೆ ಅನುಕೂಲವಾಗಲು ಆವರ್ತ ನಿಧಿ, ಸಿರಿಧಾನ್ಯಗಳ ವರ್ಷಕ್ಕಾಗಿ ಹೆಕ್ಟೇರಿಗೆ 10 ಸಾವಿರ ಪ್ರೋತ್ಸಾಹ ಧನ ನೀಡಲಾಗಿದೆ. ಪಿಯುಸಿ, ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯ್ತಿ, ಶಾಲಾ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ, ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್, ಯುವಕರಿಗೆ ತರಬೇತಿ ನೀಡುವ ಕಾರ್ಯಕ್ರಮಗಳು ದೂರದೃಷ್ಟಿಯ ಕಾರ್ಯಕ್ರಮಗಳಾಗಿವೆ. ತಳಹಂತದ, ಅವಕಾಶ ವಂಚಿತರ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ನೆರವು ನೀಡಲಾಗುತ್ತಿದೆ. ಜನಪರವಾದ ಬಜೆಟ್ ಹಾಗೂ ದುಡಿಯುವ ವರ್ಗದ ಕೈಬಲಪಡಿಸುವ ಬಜೆಟ್. ರಾಜ್ಯ ಹಾಗೂ ಈ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುವುದಾಗಿ ಹೇಳಿದರು.

ಶಿಗ್ಗಾವಿ ವಿರಕ್ತ ಮಠದ ಸಂಘ ಬಸವ ಮಹಾಸ್ವಾಮಿಗಳು, ಪುರಸಭೆ ಸದಸ್ಯ ಸುಭಾಷ್ ಚೌಹಾಣ್, ಮರಾಠಾ ಅಭಿವೃದ್ಧಿ ಮಂಡಳಿ ಸದಸಯ ಪ್ರಭು, ಶ್ರೀಕಾಂತ್ ದುಡ್ಡೀಗೌಡ, ಮಲ್ಲಿಆರ್ಜುನ ಬಾಳೀಕಾಯಿ ಉಪಸ್ಥಿತರಿದ್ದರು.

*ರಾಮನಗರದ ರಾಮಮಂದಿರ ಆಗೇ ಆಗುತ್ತದೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

https://pragati.taskdun.com/cm-basavaraj-bommaireactionhaveri/

ಶಿವಾಜಿ ಮೂರ್ತಿ ಪಕ್ಕದಲ್ಲಿ ಹೈಮಾಸ್ಟ್ ದೀಪದ ಕಂಬ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button