Latest

ಭಜರಂಗದಳ ಕಾರ್ಯಕರ್ತನ ಹತ್ಯೆ; ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ನಿನ್ನೆ ರಾತ್ರಿ 9:30ರ ಸುಮಾರಿಗೆ ದುಷ್ಕರ್ಮಿಗಳು ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಇದೀಗ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಭಜರಂಗದಳ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ನಗರ್ದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಮುಸ್ಲೀಂ ಗೂಂಡಾಗಳಿಂದಲೇ ಕೊಲೆ; ಸಚಿವ ಈಶ್ವರಪ್ಪ ಆರೋಪ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button