*ಹಸೆಮಣೆಯೇರಬೇಕಿದ್ದ ಯುವತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: 13 ದಿನಗಳಲ್ಲಿ ಹಸೆಮಣೆಯೇರಿ ಮದುವೆಯಾಗಬೇಕಿದ್ದ ಯುವತಿಯೊಬ್ಬಳು ನೇಣಿಗೆ ಕೊರಳೊಡ್ಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ. 26 ವರ್ಷದ ಚೈತ್ರಾ ಆತ್ಮಹತ್ಯೆಗೆ ಶರಣಾದ ಯುವತಿ. ಎಂ.ಕಾಂ ಪದವೀಧರೆಯಾಗಿದ್ದ ಚೈತ್ರಾಳಿಗೆ ಮದುವೆ ನಿಶ್ಚಯವಾಗಿತ್ತು. ಫೆ.4ರಂದು ಚೈತ್ರಾಳ ಮದುವೆಗೆ ಸಿದ್ಧತೆ ನಡೆಸಲಾಗಿತ್ತು. ಈ ಮಧ್ಯೆ ಚೈತ್ರಾ ಕೆಲ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ನೇಣಿಗೆ ಶರಣಾಗಿದ್ದಾಳೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಪತಿಯನ್ನು … Continue reading *ಹಸೆಮಣೆಯೇರಬೇಕಿದ್ದ ಯುವತಿ ಆತ್ಮಹತ್ಯೆ*