*ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿಳುಕುಪ್ಪ ಗ್ರಾಮದಲ್ಲಿ ನಡೆದಿದೆ. ಅಧೀಕ್ಷಾ (20) ಮೃತ ವಿದ್ಯಾರ್ಥಿನಿ. ಬಾಳೆಬೈಲು ಪದವಿ ಕಲೇಜಿನಲ್ಲಿ ಓದುತ್ತಿದ್ದಳು. ತಂದೆ-ತಾಯಿ ಮನೆಯಲ್ಲಿ ಇಲ್ಲದಿರುವಾಗ ವಿದ್ಯಾರ್ಥಿನಿ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಅಧೀಕ್ಷಾ ಇಂದು ಬೆಳಿಗ್ಗೆ ಎಷ್ಟು ಹೊತ್ತಾದರೂ ರೂಮಿನಿಂದ ಹೊರ ಬಂದಿಲ್ಲ. ಕರೆದರೂ ಬಾಗಿಲು ತೆರೆದಿಲ್ಲ. ಅನುಮಾನಗೊಂಡು ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ … Continue reading *ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ*