ತಬ್ಲಿಗಿಗಳ ಆಗಮನ; ಹೆಚ್ಚಿದ ಕೊರೊನಾ ಭೀತಿ

ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ಬಂದ ತಬ್ಲಿಘಿಗಳು

 

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿಯಾಗಿದ್ದು, ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ.

ಶಿಕಾರಿಪುರ ಮೂಲದ 8 ಮತ್ತು ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್‍ನ ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದು, ಇದು ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ.

ಮಾರ್ಚ್ 5ರಂದು ಗುಜರಾತ್‍ನ ಅಹಮದಾಬಾದ್‍ಗೆ ದಾವಣಗೆರೆಯಿಂದ ರೈಲಿನ ಮೂಲಕ ಜಿಲ್ಲೆಯ 9 ಜನರು ತೆರಳಿದ್ದರು. ನಿಜಾಮುದ್ದೀನ್ ಸಮಾವೇಶದಲ್ಲಿ ಭಾಗವಹಿಸಿದ ನಂತರ ಮಸೀದಿಯೊಂದರಲ್ಲಿ ಇವರೆಲ್ಲಾ ಆಶ್ರಯ ಪಡೆದಿದ್ದರು. ಅಲ್ಲದೇ ಲಾಕ್‍ಡೌನ್ ವೇಳೆ ಗುಜರಾತ್ ಸರ್ಕಾರ ಇವರನ್ನೆಲ್ಲಾ ಕ್ವಾರಂಟೈನ್‍ನಲ್ಲಿ ಕೂಡ ಇರಿಸಿತ್ತು. ಅಲ್ಲಿನ ಸರ್ಕಾರದ ಅನುಮತಿ ಮೇರೆಗೆ ಶುಕ್ರವಾರ ರಾತ್ರಿ ಈ ತಬ್ಲಿಘಿಗಳು ಮುಂಬೈ, ಬೆಳಗಾವಿ ಮೂಲಕ ಇದೀಗ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಇವರೆಲ್ಲರನ್ನೂ ಪ್ರಾಥಮಿಕ ಹಂತದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶಿವಮೊಗ್ಗದ ಬಾಪೂಜಿನಗರದ ಹಾಸ್ಟೆಲ್‍ವೊಂದರಲ್ಲಿ ಕ್ವಾರಂಟೈನ್ ಮಾಡಿ ನಿಗಾವಹಿಸಲಾಗಿದೆ.

Home add -Advt

Shivamogh,tabligi,entry

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button