Belagavi NewsBelgaum NewsKannada NewsKarnataka NewsLatest

*ಜಂಗೀ ನಿಖಾಲಿ ಕುಸ್ತಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಹಿರೇಬಾಗೇವಾಡಿ : ಹಿರೇಬಾಗೇವಾಡಿ ಗ್ರಾಮದ ಆರಾಧ್ಯ ದೈವ ಶ್ರೀ ಫಡಿಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಭಾರಿ ಜಂಗೀ ನಿಖಾಲಿ ಕುಸ್ತಿ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಸಂಜೆ ಚಾಲನೆ ನೀಡಿದರು.

Home add -Advt

ನಮ್ಮ ಮಣ್ಣಿನ ಸಾಂಪ್ರದಾಯಿಕ ಕಲೆಯಾದ ಕುಸ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ದೇಣಿಗೆಯನ್ನು ನೀಡಿ, ಕುಸ್ತಿ ಪಟುಗಳಿಗೆ ಬೆಂಬಲ ನೀಡಲಾಗುತ್ತಿದ್ದು, ಗ್ರಾಮೀಣ ಕ್ಷೇತ್ರದಲ್ಲಿ ಶೀಘ್ರದಲ್ಲೇ ಕುಸ್ತಿ ಆಖಾಡ ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನ ಸಮಿತಿಯ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button