Kannada NewsKarnataka NewsLatest

ಶ್ರೀ ರೇಣುಕಾ ಯಲ್ಲಮ್ಮ ದೇವಿಗೆ ಮಾಂಗಲ್ಯ ಧಾರಣೋತ್ಸವ

ಪ್ರಗತಿವಾಹಿನಿ ಸುದ್ದಿ, ಉಗರಗೋಳ:  ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಗೆ ಮಾಂಗಲ್ಯ ಧಾರಣೋತ್ಸವ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ಪ್ರತಿವರ್ಷದ ಸಂಪ್ರದಾಯದಂತೆ, ಸವದತ್ತಿ ತಾಲೂಕಿನ ಹರಳಕಟ್ಟಿ ಗ್ರಾಮಸ್ಥರು ದೇವಿಗೆ  ಮುತ್ತೈದೆತನದ ಸಂಕೇತಗಳಾದ ಸೀರೆ, ಕುಪ್ಪಸ, ಅರಿಶಿಣ-ಕುಂಕುಮ, ಹಸಿರು ಬಳೆ, ದಂಡಿ‌ ಮಾಲೆ ಹಾಗೂ ಉಡಿ ತುಂಬುವ ಸಾಮಗ್ರಿಗಳನ್ನು ತಂದಿದ್ದರು.
ಪ್ರತಿ ವರ್ಷವೂ  ಲಕ್ಷಾಂತರ ಭಕ್ತರು ಈ ಆಚರಣೆಗೆ ಸಾಕ್ಷಿಯಾಗುತ್ತಿದ್ದರು. ಆದರೆ, ಈ ಸಲ ಭಾರತದಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಕಾರಣ ದೇವಸ್ಥಾನದ ಅರ್ಚಕರು, ಅಧಿಕಾರಿಗಳು ಹಾಗೂ ಕೆಲವೇ ಹಿರಿಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿ-ವಿಧಾನ ನೆರವೇರಿದವು.
ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ, ರಾಮನಗೌಡ ತಿಪರಾಶಿ,  ಯಲ್ಲಮ್ಮ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ, ರಾಮದುರ್ಗ ಡಿವೈಎಸ್ಪಿ ಶಂಕರಗೌಡ ಪಾಟೀಲ, ಸವದತ್ತಿ ಸಿಪಿಐ ಮಂಜುನಾಥ ನಡುವಿನಮನಿ,‌ ಪರಸನಗೌಡ ಚವನಗೌಡರ ಇತರರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button