Belagavi NewsBelgaum News

*ಮೇ. 5 ಕ್ಕೆ ಶ್ರೀ ಶಿವಬಸವ ಗುರುಮಂದಿರ ಲೋಕಾರ್ಪಣೆ*

ಅಥಣಿ : ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ “ ಶ್ರೀ ಶಿವಬಸವ ಗುರುಮಂದಿರ ” ಲೋಕಾರ್ಪಣೆ ಕಾರ್ಯಕ್ರಮ ಬರುವ ಮೇ.5 ರಂದು ಅದ್ಧೂರಿಯಾಗಿ ಜರುಗಲಿದೆ ಎಂದು ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಸ್ವಾಮೀಜಿ ಹೇಳಿದರು.

ಭಾನುವಾರ ಸಪ್ತಸಾಗರ ಗ್ರಾಮದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಹಾವೇರಿಯ ಹುಕ್ಕೇರಿಮಠದ ಶ್ರೀ ಶಿವಬಸವ ಶಿವಯೋಗಿಗಳ ಜನ್ಮಸ್ಥಳ ಸಪ್ತಸಾಗರ ಗ್ರಾಮದಲ್ಲಿ ಮೇ. 1 ರಿಂದ 5 ರ ವರೆಗೆ ಐದು ದಿನಗಳವರೆಗೆ ಶ್ರೀ ಶಿವಬಸವ ಗುರುಮಂದಿರ ಲೋಕಾರ್ಪಣೆ ಹಿನ್ನಲೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಪ್ರವಚನ, ಜ್ಯೋತಿ ರತಯಾತ್ರೆ, ಸಾವಯವ ಕೃಷಿ ಚಿಂತನ, ಬೈಕ್ ರ್ಯಾಲಿ, ಮಹಿಳಾ ಸಮಾವೇಶ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಮೇ. 5 ರಂದು ನೂತನವಾಗಿ ನಿರ್ಮಾಣಗೊಂಡ ಶ್ರೀ ಶಿವಬಸವ ಗುರುಮಂದಿರದಲ್ಲಿ ಕಳಸಾರೋಹಣ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಶ್ರೀಗಳ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮ ಜರುಗಲಿವೆ ಎಂದು ಡಾ. ಮಹಾಂತಪ್ರಭು ಸ್ವಾಮೀಜಿ ತಿಳಿಸಿದರು.

Home add -Advt

ಹಾವೇರಿಯ ಹುಕ್ಕೇರಿಮಠದ ಸದಾಶಿವ ಮಹಾಸ್ವಾಮೀಜಿ ಮಾತನಾಡಿ, ಶ್ರೀ ಶಿವಬಸವ ಶಿವಯೋಗಿಗಳು ಸಪ್ತಸಾಗರ ಗ್ರಾಮದಲ್ಲಿ ಜನಿಸಿ ಲೋಕ ಕಲ್ಯಾಣಕ್ಕೆ ತಮ್ಮನ್ನು ಸಮರ್ಪಿಸಿಕೊಂಡ ಮಹಾನ್ ಸಂತ. ಇಂದು ಅವರ ಸ್ಮರಣಾರ್ಥವಾಗಿ ಹುಟ್ಟೂರಿನಲ್ಲಿ ಮಠದ ಲೋಕಾರ್ಪಣೆ ಕಾರ್ಯಕ್ರಮವನ್ನು ಭಕ್ತರು ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಹಲ್ಯಾಳ ವಿರಕ್ತಮಠದ ಗುರುಸಿದ್ದ ಮಹಾಸ್ವಾಮೀಜಿ, ಸಪ್ತಸಾಗರ ಗ್ರಾಮದ ಹಿರಿಯರು ಹಾಗೂ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು.

Related Articles

Back to top button