Latest

ಮುಂಬೈಯಲ್ಲಿ ಮತ್ತೊಂದು ದುರಂತ; 7 ಜನ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮುಂಬೈ: ದುಶ್ಚಟ, ದುರಭ್ಯಾಸಗಳು ಎಂತಹ ದುರಂತಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಕೊರೊನಾ ಅಟ್ಟಹಾಸದಿಂದ ನಲುಗಿರುವ ಮಹಾರಾಷ್ಟ್ರದಲ್ಲಿ ಮದ್ಯದಂಗಡಿ, ಬಾರ್, ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲಾಗಿದ್ದು, ಇದರಿಂದ ದುರಂತವೊಂದು ಸಂಭವಿಸಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದ್ದು, ಹೋಟೆಲ್, ಬಾರ್ ಗಳನ್ನು ಬಂದ್ ಮಾಡಲಾಗಿದೆ. ಪರಿಣಾಮ ಯಾವತ್ಮಾಳ್ ವಾನಿ ಎಂಬಲ್ಲಿ ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ 7 ಜನರು ಸಾವನ್ನಪ್ಪಿದ್ದಾರೆ.

ಮೃತರೆಲ್ಲರೂ ಕಾರ್ಮಿಕರು ಎಂದು ತಿಳಿದುಬಂದಿದೆ. ಈ ಕುರಿತು ಯಾತ್ಮಾಳ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೊರೋನಾ: ಪುಣೆ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ಬೆಂಗಳೂರು

Home add -Advt

ಕೇಂದ್ರದಿಂದ ತೆರಿಗೆ ವಿನಾಯಿತಿ

Related Articles

Back to top button