Kannada NewsKarnataka NewsLatest

*ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ; ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಯುವಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನಿಂದಿಸಿ ಅವಹೇಳನಕಾರಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕ್ಯಾಬ್ ಡ್ರೈವರ್ ಅನಿಲ್ ಕುಮಾರ್ ಬಂಧಿತ ಆರೋಪಿ. ಸುರತ್ಕಲ್ ನಲ್ಲಿ ವಾಸವಾಗಿದ್ದ ಅನಿಲ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಸಿಎಂ ಹಾಗೂ ಡಿಸಿಎಂ ವಿರುದ್ಧ ಕೆಟ್ಟ ಪದಗಳನ್ನು ಬಳಿಸಿ ನಿಂದಿಸಿ ವಿಡಿಯೋ ಅಪ್ ಲೋಡ್ ಮಾಡಿದ್ದ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯು ಐ ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ನೀಡಿದ್ದರು. ಇದೀಗ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button