Karnataka NewsLatestPolitics

*ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ಏರ್ ಪೋರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಶೀಘ್ರವೇ ದಿನಾಂಕ ಪ್ರಕಟಿಸುತ್ತೇನೆ ಎಂದರು.

ಇದಕ್ಕೂ ಮುನ್ನ ಹಾಸನದಲ್ಲಿ ಸಾಧನಾ ಸಮಾವೇಶ ನಡೆಸುತ್ತೇವೆ. ಇನ್ನು ಅಧಿಕಾರ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ನಾನು ಅಥವಾ ಡಿ.ಕೆ.ಶಿವಕುಮಾರ್ ಮಾತನಾಡಬೇಕು. ಶಾಸಕರಿಗೇನು ಗೊತ್ತಿರುತ್ತದೆ? ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾವು ಬದ್ಧ ಎಂದರು.

Home add -Advt


Related Articles

Back to top button