Politics

*ಮುಡಾ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಅರ್ಕಾವತಿ ಬಡಾವಣೆ ನಿವಾಸಿಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್ ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ, ರಾಜಶೇಖರ್ ಎಂಬುವವರು ಸಿಎಂ ಸಿದ್ದರಾಮಯ್ಯ, ಬಿಡಿಎ ಆಯುಕ್ತ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಅರ್ಕಾವತಿ ಲೇಔಟ್ ನಲ್ಲಿ ಹಂಚಿಕೆಯಾಗಿದ್ದ ನಿವೇಶನ ಭೂಗಳ್ಳರ ಪಾಲಾಗುತ್ತಿದೆ. ಅಧಿಕಾರ ದುರ್ಬಳಕೆಯಿಂದ ನಿವೇಶದಾರರಿಗೆ ತೊಂದರೆಯಾಗುತ್ತಿದೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

Home add -Advt

Related Articles

Back to top button