
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೆಳಗಾವಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ಹೆಚ್ ಎ ಎಲ್ ಮೂಲಕ ವಿಶೇಷ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿದಣಕ್ಕೆ ತೆರಳಲಿದ್ದಾರೆ. ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನಿರ್ಮಾಣಗೊಂಡಿರುವ ಆಧುನಿಕ ಸೌಲಭ್ಯಗಳ ಬಹುಮಹಡಿ ಸಂಕೀರ್ಣ ಕಟ್ತಡ ಉದ್ಘಾಟಿಸಲಿದ್ದಾರೆ.
ಬಳಿಕ ಕೃಷಿ ಇಲಾಖೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ್ನನು ವಿತರಿಸಲಿದ್ದಾರೆ.
