Politics

*ತೀವ್ರ ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ನಡೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಸಿಎಂ ಅರ್ಜಿ ವಜಾಗೊಳಿಸಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಹೈಕೋರ್ಟ್ ತೀರ್ಪು ಪ್ರಕಟವಾಗಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ತುರ್ತು ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮ್ಯಯ ಅವರ ಮುಂದಿನ ನಡೆ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button