Latest

ಬಿಎಸ್ ವೈ ಈ ವಯಸ್ಸಲ್ಲಿ ಏನೇನು ಮಾಡಿದ್ದಾರೋ…ಸಿದ್ದರಾಮಯ್ಯ ವ್ಯಂಗ್ಯ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಿಡಿ ಬ್ಲಾಕ್ ಮೇಲ್ ವಿಚಾರವಾಗಿ ವ್ಯಂಗ್ಯವಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಎಸ್.ವೈ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾರೋ ಯಾರಿಗೆ ಗೊತ್ತು? ಅದು ಅಸಹ್ಯವಾಗಿ ಬೇರೆ ಇದೆಯಂತೆ ಎಂದು ಲೇವಡಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿಡಿ ವಿಚಾರದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಈ ಬಗ್ಗೆ ರಾಜ್ಯದ ಜನತೆಗೆ ಗೊತ್ತಾಗಬೇಕು ಎಂದು ಆಗ್ರಹಿಸಿದರು.

Home add -Advt

ಏಪ್ರಿಲ್ ನಂತರ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಈ ಬಗ್ಗೆ ನನಗೆ ಆರ್.ಎಸ್.ಎಸ್ ಮೂಲಗಳಿಂದ ಮಾಹಿತಿ ಬಂದಿದೆ. ಯಡಿಯೂರಪ್ಪ ಪೂರ್ಣಾವಧಿ ಮುಗಿಸುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಬಿ.ಎಸ್.ವೈ ಅವರನ್ನು ತೆಗೆಯುತ್ತೇನೆ ಎಂದರೆ ಸರ್ಕಾರ ನಡೆಸೋಕೆ ಆಗುತ್ತಾ? ಏಪ್ರಿಲ್ ಬಳಿಕ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದಾರೆ.

Related Articles

Back to top button