Kannada NewsKarnataka NewsLatestPolitics

*ಡಿ.ಕೆ.ಶಿವಕುಮಾರ್ ಅವರನ್ನು ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ*

ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ಯುವನಾಯಕರಿಗೆ ಮಾದರಿ ಎಂದು ಶ್ಲಾಘನೆ

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Home add -Advt

ಡಿ.ಕೆ.ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂದು ಶ್ಲಾಘಿಸಿದ್ದಾರೆ.

ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ.. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ.

ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ.

ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ತಿಳಿಸಿದ್ದಾರೆ.


Related Articles

Back to top button