Latest

*ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸುವಂತೆ ಒತ್ತಾಯ; ಇಲ್ಲವಾದಲ್ಲಿ ಆತ್ಮಹತ್ಯೆ ಬೆದರಿಕೆ ಹಾಕಿದ ಬೆಂಬಲಿಗರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿಯುತ್ತಾರೆ ಎಂಬ ಸುದ್ದಿ ಬೆನ್ನಲ್ಲೇ ಕೋಲಾರದಿಂದ ಬೆಂಗಳೂರಿಗೆ ಆಗಮಿಸಿರುವ ಸಿದ್ದರಾಮಯ್ಯ ಬೆಂಬಲಿಗರು ಅವರ ನಿವಾಸದ ಮುಂದೆ ಧರಣಿ ನದೆಸಿದ್ದಾರೆ. ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧೆ ಮಾಡಬೇಕು ಇಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

Home add -Advt

ಸಿದ್ದರಾಮಣ್ಣ ಕೋಲಾರಕ್ಕೆ ಬರಲೇಬೇಕು, ನಿಮ್ಮನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದು ಘೋಷಣೆಗಳನ್ನು ಕೂಗಿರುವ ಬೆಂಬಲಿಗರು ಶರ್ಟ್ ಬಿಚ್ಚಿ ಪರಸ್ಪರ ಬಾರುಕೋಲಿನಿಂದ ಹೊಡೆದುಕೊಂಡು ಘೋಷಣೆಗಳನ್ನು ಕೂಗಿದ್ದಾರೆ.

Related Articles

Back to top button