Politics

*ವಿಂಗ್ ಕಮಾಂಡರ್ ನಿಂದ ಹಲ್ಲೆ ಪ್ರಕರಣ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ವಿಂಗ್ ಕಮಾಂಡರ್ ನಿಂದ ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಮ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಆದಿಹಳ್ಳಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಂಗ್ ಕಮಾಂಡರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ವಿಂಗ್ ಕಮಾಂಡರ್ ಆಗಿರಲಿ, ಯಾರೇ ಆಗಿರಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಘಟನೆ ಬಗ್ಗೆ ವಿಂಗ್ ಕಮಾಂಡರ್, ಬೈಕ್ ಸವಾರ ಇಬ್ಬರೂ ದೂರು ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದರು.

Home add -Advt

ಇದೇ ವೇಳೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ನಾವು ಬಿಡಲ್ಲ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯಲ್ಲಿದೆ. ಕನ್ನಡ ಮತ್ತು ಇಂಗ್ಲೀಷ್. ಮಾತೃ ಭಾಷೆ ಮತ್ತು ಇಂಗ್ಲೀಷ್ ಕಲಿಸಲು ಅವಕಾಶವಿದೆ. ಇಲ್ಲಿ ತ್ರಿಭಾಷಾ ಸೂತ್ರ ಇಲ್ಲ. ಕನ್ನಡ ಮತ್ತು ಇಂಗ್ಲೀಷ್ ಮಾತ್ರ ಕಲಿಸುತ್ತೇವೆ. ಹಿಂದಿ ಭಾಷೆ ಹೇರಿಕೆಗೆ ಅವಕಾಶವಿಲ್ಲ ಎಂದು ಹೇಳಿದರು.

ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ.

ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ.

ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ.

ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ.
ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ.

Related Articles

Back to top button