EducationKarnataka NewsLatestPolitics
*16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಹಲವಾರು ಮಹತ್ವದ ಘೋಷಣೆ ಮಾಡಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿಸಿದ್ದಾರೆ. ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ.
ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಘೋಷಿಸಿದ್ದಾರೆ.



