*ಸಿದ್ದರಾಮಯ್ಯ ಸ್ಪರ್ಧೆ ಕ್ಷೇತ್ರ ನಾಳೆ ಅಧಿಕೃತ ಘೋಷಣೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ನಾಳೆ ತೆರೆ ಬೀಳುವ ಸಾಧ್ಯತೆ ದಟ್ಟವಾಗಿದೆ.

ಸಿದ್ದರಾಮಯ್ಯ ಈಬಾರಿ ಬಾದಾಮಿ ಕ್ಷೇತ್ರ ಬಿಟ್ಟು ಕೋಲಾರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತಾದರೂ ವರುಣಾ ಕ್ಷೇತ್ರದಿಂದಲೂ ಸ್ಪರ್ಧಿಸುವ ಸಾಧ್ಯತೆ ಬಗ್ಗೆಯೂ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ನಾಳೆ ಸೋಮವಾರ ಎರಡನೇ ಬಾರಿಗೆ ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡುತ್ತಿದ್ದು, ಕುತೂಹಲವನ್ನು ಇಮ್ಮಡಿಗೊಳಿಸಿದೆ. ನಾಳೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಕ್ಷೇತ್ರ ಆಯ್ಕೆಯಲ್ಲಿ ಗೊಂದಲದಲ್ಲಿರುವ ಸಿದ್ದರಾಮಯ್ಯ, ನಾಳೆ ಕೋಲಾರ ಭೇಟಿ ಮಹತ್ವ ಪಡೆದುಕೊಂಡಿದೆ. ನಾಳಿನ ಕೋಲಾರ ಪ್ರವಾಸದ ವೇಳೆ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಖಚಿತ ಪಡಿಸಿದರೆ ಕೋಲಾರ ಚುನಾವಣಾ ಅಖಾಡ ಇನ್ನಷ್ಟು ರಂಗೇರಲಿದೆ. ನಾಳೆ ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಬಳಿಕ ಮಿನಿ ಕ್ರೀಡಾಂಗಣದಲ್ಲಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿಯೇ ಸಿದ್ದರಾಮಯ್ಯ ಸ್ಪರ್ಧೆ ಕ್ಷೇತ್ರ ಘೋಷಿಸುವ ಸಾಧ್ಯತೆ ಇದೆ. ವಿಶೇಷವಾಗಿ ಕೋಲಾರದಿಂದ ಸ್ಪರ್ಧೆ ಬಗ್ಗೆ ಘೋಷಿಸಬಹುದೇ ಎಂಬುದನ್ನು ಕಾದುನೋಡಬೇಕಾಗಿದೆ.

*ಸ್ವಾಮೀಜಿಗಳಿಗೆ ಟಿಕೆಟ್ ನೀಡುವ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು?*

https://pragati.taskdun.com/cm-basavaraj-bommaihaverikannada-sahitya-sammelana/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button