LatestUncategorized

*ನಳೀನ್ ಕುಮಾರ್ ಕಟೀಲ್ ಒಬ್ಬ ಬಫೂನ್; ಸಿದ್ದರಾಮಯ್ಯ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಖರ್ಗೆ ಪುತ್ರರಿಬ್ಬರೂ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಸಿದ್ದರಾಮಯ್ಯ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಖರ್ಗೆ ಪುತ್ರ ಪ್ರಿಯಾಂಕ ಖರ್ಗೆ ಬಿಜೆಪಿ ಸೇರಲಿದ್ದಾರೆ ಎಂಬ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಳೀನ್ ಕುಮಾರ್ ಒಬ್ಬ ಬಫೂನ್ ಎಂದು ಗುಡುಗಿದರು.

ನಳೀನ್ ಕುಮಾರ್ ಕಟೀಲ್ ಒಬ್ಬ ಬಫೂನ್, ವಿಧೂಷಕ. ಕಟೀಲುಗೆ ರಾಜಕೀಯ ಜ್ಞಾನವಿಲ್ಲ, ಆತ ಏನು ಮಾತನಾಡುತ್ತಾನೆ ಎಂಬುದು ಅವನಿಗೆ ಗೊತ್ತಿಲ್ಲ ಎಂದು ಏಕವಚನದಲ್ಲಿ ವಾಗ್ದಳಿ ನಡೆಸಿದ್ದಾರೆ.

*ಆಡಿಯೋ, ದಾಖಲೆಗಳಿವೆ, 20 ಸಿಡಿಗಳಿವೆ ಎನ್ನುತ್ತಲೇ ಯಾವುದನ್ನೂ ಬಿಡುಗಡೆ ಮಾಡಲ್ಲ ಎಂದ ರಮೇಶ್ ಜಾರಕಿಹೊಳಿ*

https://pragati.taskdun.com/ramesh-jarakiholid-k-shivakumarpressmeet/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button