Politics

*ನಾಳೆ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮಗಳು ದಿಢೀರ್ ರದ್ದು*

ಪ್ರಗತಿವಾಹಿನಿ ಸುದ್ದಿ: ರಾಯಚೂರಿನಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಯೋಜನೆ, ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ದಿಢೀರ್ ರದ್ದುಗೊಳಿಸಲಾಗಿದೆ.

Home add -Advt

ರಾಯಚೂರು ನಗರದ ವಾಲ್ ಕಾಟ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಕಾರ್ಯಕ್ರಮವನ್ನು ನಾಳೆ ಆಯೋಜಿಸಲಾಗಿತ್ತು. ಈ ವೇಳೆ ಪ್ರಜಾಸೌಧ ಕಟ್ಟಡದ ಅಡಿಗಲ್ಲು ಹಾಗೂ ಮುಂಗಾರು ಉತ್ಸವ ಸೇರಿ ವಿವಿಧ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡುವವರಿದ್ದರು. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಬೆನ್ನಲ್ಲೇ ನಾಳಿನ ರಾಯಚೂರು ಕಾರ್ಯಕ್ರಮದ ಸಿದ್ಧತೆಗಳನ್ನು ರದ್ದುಗೊಳಿಸಲಾಗಿದೆ.

Related Articles

Back to top button