Politics

*ಜನಿವಾರ ತೆಗೆಸಿದ ಪ್ರಕರಣ: ತಪ್ಪಿತಸ್ಥ ಅಧಿಕಾರಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆಗೆ ಬಂಡ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಸರಿಯಲ್ಲ. ಇದು ನಿಯಮಬಾಹಿರ. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು. ಈ ರೀತಿ ಅನವಾಶ್ಯಕವಾಗಿ ಧಾರ್ಮಿಕ ನಂಬಿಕೆಗಳ ವಿರುದ್ಧವಾದ ನಿಯಮ ಹೇರಿಕೆ ಮಾಡುವುದು ಸರಿಯಲ್ಲ ಎಂದರು.

Home add -Advt

ಜನಿವಾರ ತೆಗೆಸಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಯಾರೇ ತಪ್ಪು ಮಾಡಿದರೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Related Articles

Back to top button