Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಮಾತುಕತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ್ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮಾಜಿ ಸಚಿವ, ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಶಾಸಕ ಶಿವರಾಮ್ ಹೆಬ್ಬಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಭೇಟಿಯಾಗಿದ್ದು, ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಹೊತ್ತಲ್ಲೇ ಶಿವರಾಮ್ ಹೆಬ್ಬಾರ್, ಸಿಎಂ ಸಿದ್ದರಾಮಯ್ಯ ಭೇಟಿಯಾಗಿರುವುದು ಕುತೂಹಲ ಇಮ್ಮಡಿಗೊಳಿಸಿದೆ.


Home add -Advt

Related Articles

Back to top button