Kannada NewsPolitics
*ಸಚಿವ ರಾಜಣ್ಣ ಹೇಳಿಕೆಗೆ ಸಿಎಂ ಖಡಕ್ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಸಚಿವ ಕೆ.ಎನ್. ರಾಜಣ್ಣ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಕ್ರಾಂತಿಯಾಗಲಿದೆ ಎಂಬ ರಾಜಣ್ಣ ಹೇಳಿಕೆ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ತಿಳಿಸಿದರು.




