Latest

*ಸಿದ್ದರಾಮಯ್ಯನವರ ಶ್ರೀನಗರ ಪ್ರವಾಸ ದಿಢೀರ್ ರದ್ದು*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ದಿಢೀರ್ ರದ್ದಾಗಿದೆ ಎಂದು ತಿಳಿದುಬಂದಿದೆ.

ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲಾ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ಕೊನೇ ಕ್ಷಣದಲ್ಲಿ ರದ್ದಾಗಿದೆ.

Home add -Advt

ಶ್ರೀನಗರದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಸಿದ್ದರಾಮಯ್ಯನವರು ಪಾಲ್ಗೊಳ್ಳಬೇಕಿತ್ತು. ಇಂದು ಬೆಳಿಗ್ಗೆ ಬೆಳಿಗ್ಗೆ 9:15ಕ್ಕೆ ಸಿದ್ದರಾಮಯ್ಯ ದೆಹಲಿಯಿಂದ ಶ್ರೀನಗರಕ್ಕೆ ವಿಮಾನದಲ್ಲಿ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಅಶೋಕ್ ಪಟ್ಟಣ, ಐವಾನ್ ಡಿಸೋಜಾ ದೆಹಲಿ ಏರ್ ಪೋರ್ಟ್ ಗೆ ಬೆಳಿಗ್ಗೆ 8 ಗಂಟೆಗೆ ಆಗಮಿಸಿದ್ದರು. ಆದರೆ ದೆಹಲಿ-ಶ್ರೀನಗರ ನಡುವೆ ವಿಮಾನ ಹಾರಾಟಗಳು ರದ್ದಾಗಿವೆ ಎಂದು ತಿಳಿದುಬಂದಿದೆ.

ಶ್ರೀನಗರದಲ್ಲಿ ಹವಾಮಾನ ವೈಫರೀತ್ಯ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಶ್ರೀನಗರ ನಡುವಿನ ಎಲ್ಲಾ ವಿಮಾನ ಹಾರಾಟ ರದ್ದುಪಡಿಸಲಾಗಿದೆ. ಈ ಕಾರಣದಿಂದ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ.

*ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ; ತೀವ್ರ ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ*

https://pragati.taskdun.com/ramesh-jarakiholid-k-shivakumaraudiobelagavi/

Related Articles

Back to top button