Politics

*ರೈತರ ಸಾಲ ಮನ್ನಾ ಮಾಡಿ ಅಂದ್ರೆ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ ಬಿಎಸ್ ವೈ: ಆದ್ರೆ ಇದೇ ಬಿಜೆಪಿಯವ್ರು ಅದಾನಿ-ಅಂಬಾನಿ ಸಾಲ ಮನ್ನಾ ಮಾಡಿದರು*

ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ ಬಿಜೆಪಿಯವರು ಸುಳ್ಳು ಸುಳ್ಳೆ ಟೀಕಿಸಿದರು.ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದರು. ಬಳಿಕ ನಮ್ಮ ಗ್ಯಾರಂಟಿಗಳನ್ನೇ ಕದ್ದು ಮೋದಿ ಗ್ಯಾರಂಟಿ ಎಂದು ಆರಂಭಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ‘ಮೋದಿ ಕಿ ಗ್ಯಾರಂಟಿ’ ಎಂದು ಘೋಷಿಸಿದರು. ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಚುನಾವಣೆಯನ್ನು ಎದುರಿಸಿದರು. 1980ರಲ್ಲಿ ಬಿಜೆಪಿ ಪ್ರಾರಂಭವಾದಾಗ ಕೇವಲ 2 ಸ್ಥಾನಗಳನ್ನು ಪಡೆದಿತ್ತು. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನವನ್ನು ಪಡೆದಿದ್ದಾರೆ.

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ನಾವು ಕಳೆದ ಬಾರಿ ಕಾಂಗ್ರೆಸ್ ಕಮ್ಮಿ ಗೆದ್ದಿದ್ದರೂ , ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದರು.

Home add -Advt

ಬಿಜೆಪಿಯವರು 2008 ರಿಂದ 2013 , 2019 ರಿಂದ 2023 ರವರೆಗೆ ಅಧಿಕಾರ ನಡೆಸಿದ್ದೀರಿ. ಬಿಜೆಪಿಯವರು ಒಮ್ಮೆಯೂ ಬಹುಮತ ನೀಡದೇ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ.

ಬಿಜೆಪಿಯವರು ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ, ಅದರಲ್ಲಿ ಶೇ10 ರಷ್ಟು ಈಡೇರಿಸಲು ಸಾಧ್ಯವಾಗಲಿಲ್ಲ. ಇದೇ ಸದನದಲ್ಲಿ ಯಡಿಯೂರಪ್ಪನವರು ಭರವಸೆಗಳನ್ನು ಈಡೇರಿಸಲು, ಸಾಲ ಮನ್ನಾ ಮಾಡಲು ನಾವು ನೋಟ್ ಪ್ರಿಂಟ್ ಮೆಷಿನ್ ಇಟ್ಟಿಲ್ಲ ಎಂದಿದ್ದರು ಎಂದು ಟೀಕಿಸಿದರು.

Related Articles

Back to top button