Kannada NewsKarnataka NewsLatestPolitics

*ಈ ತರಹದ ಬಜೆಟ್ ಉತ್ತರ ಇದೇ ಮೊದಲು; ವಿಪಕ್ಷ ನಾಯಕನೂ ಇಲ್ಲ; ಪ್ರತಿಪಕ್ಷದವರ ಆಸನದಲ್ಲಿ ಒಬ್ಬನೇ ಒಬ್ಬ ಸದಸ್ಯನೂ ಇಲ್ಲ…ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಾನು 14 ಬಜೆಟ್ ಮಂಡಿಸಿದ್ದೇನೆ. ಇದೇ ಮೊದಲ ಬಾರಿಗೆ ವಿಪಕ್ಷದವರು ಒಬ್ಬರೂ ಇಲ್ಲದ ಸಮಯದಲ್ಲಿ ಉತ್ತರ ಕೊಡುತ್ತಿದ್ದೇನೆ ಎಂದು ಹೇಳಿದರು.

ಸದನದಲ್ಲಿ ವಿಪಕ್ಷದವರ ಆಸನವೇ ಖಾಲಿ ಖಾಲಿಯಾಗಿದೆ. ಈ ತರಹದ ಬಜೆಟ್ ಉತ್ತರ ಇದೇ ಮೊದಲು, ರಾಷ್ಟ್ರೀಯ ಪಕ್ಷ ಬಿಜೆಪಿಗೆ ಒಬ್ಬ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಕೊಲ್ಳಲು ಆಗಿಲ್ಲ. ಅಂದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು.

ಬಿಜೆಪಿಯವರಿಗೆ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವ ವ್ಯವಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button