Kannada NewsKarnataka NewsLatestPolitics

*ನನ್ನನ್ನು ಬೆಳೆಸಿದಂತೆ ಮುಂದೆ ಯತೀಂದ್ರನನ್ನೂ ಬೆಳೆಸಿ: ಕ್ಷೇತ್ರದ ಜನರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ*

ಪ್ರಗತಿವಾಹಿನಿ ಸುದ್ದಿ: ನನ್ನ ಕೊನೆಯ ಉಸಿರಿರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Home add -Advt

ಮೈಸೂರಿನ ವರುಣಾ ಹೋಬಳಿಯ ವರಕೋಡು ಗ್ರಾಮದಲ್ಲಿ ಬೀರೇಶ್ವರ ದೇವರ ದೇವಸ್ಥಾನ ಉದ್ಘಾಟಿಸಿ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ಸೋಲು, ಗೆಲುವು ಎರಡನ್ನೂ ಕಂಡಿದ್ದೇನೆ. ಆದರೂ ಜನಸೇವೆ ಮಾಡುವುದನ್ನು ಮರೆತಿಲ್ಲ. ಕೈಲಾದಷ್ಟು ಜನಸೇವೆ ಮಾಡಿಕೊಂಡು ಬಂದಿದ್ದೇನೆ ಎಂದರು.

ನಾನು ಕ್ಷೇತ್ರಕ್ಕೆ ಈಗ ಜಾಸ್ತಿ ಬರಲು ಆಗುತ್ತಿಲ್ಲ. ಯತೀಂದ್ರ ಸಿದ್ದರಾಮಯ್ಯ ಕ್ಷೇತ್ರವನ್ನು ನೋಡಿಕೊಳ್ಳುತ್ತಾನೆ. ಅಭಿವೃದ್ಧಿ ದೃಷ್ಟಿಯಿಂದ ಅವನು ಹೇಳಿದ ಕೆಲಸವನ್ನು ಮಾಡಿಕೊಡುತ್ತೇನೆ. ನೀವು ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಮುಂದೆಯೂ ಬೆಳೆಸಬೇಕು ಎಂದು ಹೇಳಿದರು.

Related Articles

Back to top button