*ಸಿಎಂ ಸಿದ್ದರಾಮಯ್ಯ ಅವರ ನಾಳಿನ ಜಿಲ್ಲಾ ಪ್ರವಾಸ ದಿಢೀರ್ ರದ್ದು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಪ್ರವಾಸ ದಿಢೀರ್ ರದ್ದುಗೊಂಡಿದೆ. ಅ.12 ನಾಳೆ ಗುರುವಾರದಂದು ಸಿಎಂ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ನಾಳಿನ ಜಿಲ್ಲಾ ಪ್ರವಾಸ ರದ್ದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Home add -Advt *ವೀರಶೈವ ಸಮಾಜ ಇತರ‌ ಸಮಾಜಗಳಿಗೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*