Kannada NewsKarnataka NewsLife StyleNational

*ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ: ಏಳು ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ಬಿಹಾರ ರಾಜ್ಯದ ಜೆಹಾನಾಬಾದ್ ಜಿಲ್ಲೆಯ ಮಗ್ಗುಂಪುರ್‌ನಲ್ಲಿರುವ ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಕಾಲ್ತುಳಿತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 35 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ

ಮಖ್ಯುಂಪುರ ಬ್ಲಾಕ್‌ನ ವನವರ್ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಮಖ್ಯುಂಪುರ್ ಮತ್ತು ಜೆಹಾನಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಶ್ರಾವಣ ಮಾಸದ ನಾಲ್ಕನೇ ಸೋಮವಾರದಂದು ದೇವಾಲಯದ ಒಳಗೆ ಜನದಟ್ಟಣೆ ಹೆಚ್ಚಾದಾಗ ಈ ಘಟನೆ ನಡೆದಿದೆ. ಭಾನುವಾರ ರಾತ್ರಿಯಿಂದಲೇ ಸಿದ್ದೇಶ್ವರನಾಥ ದೇಗುಲದಲ್ಲಿ ಭಕ್ತರ ದಂಡೇ ಇತ್ತು ಎಂದು ದೇಗುಲದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ರಾತ್ರಿ 1 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ದೇವಸ್ಥಾನದಲ್ಲಿದ್ದವರೆಲ್ಲರೂ ಪ್ರಾಣ ಉಳಿಸಿಕೊಳ್ಳಲು ಓಡಲಾರಂಭಿಸಿದರು, ಇದರಿಂದಾಗಿ ಹತ್ತಾರು ಜನರು ದೇವಾಲಯದ ಆವರಣದಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button