LatestUncategorized

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬ್ರೇಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟಿಪ್ಪು ಸುಲ್ತಾನ್ ಗೆ ಹೋಲಿಕೆ ಮಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ಬಿಜೆಪಿ ನಾಯಕರು ಬಿಡುಗಡೆಗೆ ಸಿದ್ಧವಾಗಿದ್ದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಬ್ರೇಕ್ ನೀಡಿದೆ.

ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಪುಸ್ತಕವನ್ನು ಬಿಡುಗಡೆ ಮಾಡುವಂತಿಲ್ಲ ಹಾಗೂ ಪುಸ್ತಕ ಮಾರಾಟ ಮಾಡುವಂತೆಯೂ ಇಲ್ಲ ಎಂದು ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

Related Articles

ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ತಡೆ ಕೋರಿ ಸಿದ್ದರಾಮಯ್ಯ ಪುತ್ರ, ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ಕಾಂಗ್ರೆಸ್ ನಾಯಕರು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದುಗೊಳಿಸುವಂತೆ ದೂರು ನೀಡಿದ್ದರು. ಬಿಜೆಪಿ ವಿರುದ್ಧ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಈ ಎಲ್ಲಾ ಬೆಳವಣಿಗೆ ಮಧ್ಯೆಯೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ ನೀಡಿದ್ದು, ಸಚಿವ ಅಶ್ವತ್ಥನಾರಾಯಣ ಹಾಗೂ ಇನ್ನಿತರರಿಗೆ ನೋಟೀಸ್ ಜಾರಿ ಮಾಡಿದೆ. ಈ ಪುಸ್ತಕ ಬಿಡುಗಡೆಯ ಹಿಂದಿನ ಉದ್ದೇಶವೇನು? ಎಂದು ಕೋರ್ಟ್ ಪ್ರಶ್ನಿಸಿದೆ.

*ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ*

https://pragati.taskdun.com/siddu-nija-kanasugalubook-releasebjpdefamation-casesiddaramaiah/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button