Kannada NewsKarnataka NewsLatest
ಕೇದಾರನಾಥಕ್ಕೆ ತೆರಳುವ ಮುನ್ನ ಶ್ರೀಗಳ ಆಶಿರ್ವಾದ ಪಡೆದ ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕರೂ, ಲಕ್ಷ್ಮಿ ತಾಯಿ ಕೋ ಆಪರೇಟಿವ್ ಸೊಸೈಟಿ ಚೇರಮನ್ ರೂ ಆಗಿರುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಬೆಳಗಾವಿಯಿಂದ ಕೇದಾರನಾಥ ಪ್ರವಾಸಕ್ಕೆ ತೆರಳಿದರು.

ಬೆಂಗಳೂರಿನಿಂದ ಅವರು ಬುಧವಾರ ಕೇದಾರನಾಥ ಸ್ವಾಮಿಯ ದರ್ಶನಕ್ಕೆ ಪ್ರಯಾಣ ಬೆಳೆಸಲಿದ್ದು, ಪ್ರಯಾಣಕ್ಕೆ ಮುನ್ನ ಮುತ್ನಾಳ ಕೇದಾರಪೀಠದ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವದಿಸಿ, ಪ್ರಯಾಣಕ್ಕೆ ಶುಭ ಕೋರಿದರು.



