Karnataka NewsLatestPolitics

*ಸಿಎಂ ಡಿ.ಕೆ.ಶಿವಕುಮಾರ್ ಮನೆಯಿಂದಲೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿಎಂ ಅವರಿಂದ ಗಣತಿ ನಮೂನೆ ಭರ್ತಿ ಮಾಡಿಸುವ ಮೂಲಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಂದ ಗಣತಿ ನಮೂನೆ ಪಡೆದು, ಭರ್ತಿ ಮಾಡಿದರು. ಈ ಮೂಲಕ ಸಿಎಂ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ಮತದಾರರಿಗೆ ಪ್ರೇರಣೆ ನೀಡಿದ್ದಾರೆ. ಈ ವೇಳೆ ಸಿಎಂ ಅವರ ತವರೂರು ಕನಕಪುರ ಒಳಗೊಂಡ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಉಪಸ್ಥಿತರಿದ್ದರು.

ಈ ವೇಳೆ ಮಾತನಡಿದ ಸಿಎಂ ಡಿ.ಕೆ.ಶಿವಕುಮಾರ್, ಇಂದಿನಿಂದ ಅಧಿಕೃತವಾಗಿ ಎಸ್ ಐಆರ್ ಆರಂಭವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅಧಿಕಾರಿಗಳೊಂದಿಗೆ ಸಹಕರಿಸಿ,7 ದಿನಗಳಲ್ಲೇ ಎಲ್ಲರಿಗೂ ಫಾರ್ಮ್​ ಕೊಡುತ್ತಾರೆ. ದಯವಿಟ್ಟು ನಿಮ್ಮ ಫೋನ್ ನಂಬರ್, ಆಧಾರ್ ಕಾರ್ಡ್​ ಮಾಹಿತಿಗಾಗಿ ಕೊಡಬೇಕು. ಬೇರೆ ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುತ್ತಿದ್ದಾರೆ. ಮತದಾನ ಇಲ್ಲದೆ ಇದ್ರೆ ನಾವು ಯಾಕೆ ಗ್ಯಾರಂಟಿ ಕೊಡಬೇಕು? ಹೀಗಾಗಿ ಈ ಅಭಿಯಾನದಲ್ಲಿ ಭಾಗಿಯಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ಕರೆ ನೀಡಿದರು.

Home add -Advt

Related Articles

Back to top button