Kannada NewsKarnataka NewsLatest
*ಶಿರಸಿ-ಕುಮಟಾ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ; ಶಿರಸಿ: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಲಿದೆ.
ಈ ಕುರಿತು ಶಿರಸಿ ಸಹಾಯಕ ಆಯುಕ್ತ ಆರ್.ದೇವರಾಜ್ ಮಾಹಿತಿ ನೀಡಿದ್ದು, ರಸ್ತೆ ಅಗಲೀಕರಣ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವ ನಿಟ್ಟಿನಲ್ಲಿ ನವೆಂಬರ್ 1ರಿಂದ ಮೇ 31ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಹೆದ್ದಾರಿ ಅಗಲೀಕರಣಕ್ಕಾಗಿ ಆರ್ ಎನ್ ಎಸ್ ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಈಗಾಗಲೇ 33 ಕಿ.ಮೀ ವ್ಯಾಪ್ತಿಯಲ್ಲಿ 26 ಕಿ.ಮೀ ವರೆಗೂ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.



