Karnataka NewsLatestPolitics

*ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಪರಿಶೀಲಿಸಬೇಕಾದ BLOಗಳು ಕಲ್ಯಾಣ ಮಂಟಪದಲ್ಲಿ ‘ಎಸ್.ಐ.ಆರ್ ಜಾತ್ರೆ’ ಮಾಡುತ್ತಿದ್ದಾರೆ: ಜೆಡಿಎಸ್ ಕಿಡಿ*

ಪ್ರಗತಿವಾಹಿನಿ ಸುದ್ದಿ: ರಾಮನಗರದಲ್ಲಿ ಚುನಾವಣಾ ಆಯೋಗದ ನಿಯಮಗಳು ಸಂಪೂರ್ಣ ಗಾಳಿಗೆ ತೂರಲಾಗಿದೆ ಎಂದು ಜೆಡಿಎಸ್ ಕಿಡಿಕಾರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.

ಎಸ್ ಐಆರ್ ಪ್ರಕ್ರಿಯೆಯಲ್ಲಿ ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಪರಿಶೀಲಿಸಿ ಅರ್ಜಿ ವಿತರಿಸಬೇಕಾದ ಬಿ.ಎಲ್.ಓ. ಅಧಿಕಾರಿಗಳು, ರಾಮನಗರ ಟೌನ್ ನಗರಸಭೆಯ ವಾರ್ಡ್ ನಂ-23, ಟಿಪ್ಪುನಗರದ ಕಲ್ಯಾಣ ಮಂಟಪವೊಂದರಲ್ಲಿ ಎಲ್ಲರನ್ನೂ ಸೇರಿಸಿ ‘ಎಸ್.ಐ.ಆರ್ ಜಾತ್ರೆ’ ಮಾಡುತ್ತಿದ್ದಾರೆ! ಇದು ಪ್ರಜಾಪ್ರಭುತ್ವದ ಅಣಕವಲ್ಲದೇ ಮತ್ತೇನು? ಎಂದು ಜೆಡಿಎಸ್ ಪ್ರಶ್ನಿಸಿದೆ.

ಚುನಾವಣಾ ನಿಯಮಗಳನ್ನು ಉಲ್ಲಂಘಿಸಿ, ತಮ್ಮಿಷ್ಟದಂತೆ ವರ್ತಿಸುತ್ತಿರುವ ಈ ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯ ಚುನಾವಣಾ ಆಯೋಗದ ಮುಖ್ಯ ಅಧುಕಾರಿಗಳು ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

Home add -Advt

ಪಾರದರ್ಶಕತೆಗೆ ಹೆಸರಾದ ಚುನಾವಣಾ ಆಯೋಗ, ಕಾನೂನು ಬಾಹಿರವಾಗಿ ನಡೆಯುತ್ತಿರುವ ಇಂತಹ ಅಕ್ರಮಗಳ ವಿರುದ್ಧ ಕ್ರಮ ಜರುಗಿಸಿ, ತಪ್ಪಿತಸ್ಥರನ್ನು ಅಮಾನತುಗೊಳಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

Related Articles

Back to top button