Latest

ನಾಳೆ ಸರ್ವಜ್ಞ ಜಯಂತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಇವರ ಸಯುಕ್ತಾಶ್ರಯದಲ್ಲಿ ಫೆ.೨೦ ರಂದು ಬೆಳಗ್ಗೆ ೧೧.೩೦ ಕ್ಕೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಸರ್ವಜ್ಞ ಜಯಂತಿ ಸಮಾರಂಭ ಆಯೋಜಿಸಲಾಗಿದೆ.
ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಉಪಸ್ಥಿತರಿರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ, ಜೈವಿಕ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕ ಅನಿಲ ಬೆನಕೆ, ಸರಕಾರದ ಮುಖ್ಯ ಸಚೇತಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಶಾಸಕ ಮಹಾಂತೇಶ ಕೌಜಲಗಿ, ಶಾಸಕಿ ಡಾ. ಅಂಜಲಿ ನಿಂಬಾಳಕರ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನ ಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯರು ಉಪಸ್ಥಿತರಿರುವರು.
ಭವ್ಯ ಮೆರವಣಿಗೆ: ಫೆ.೨೦ ರಂದು ನಡೆಯುವ ಸರ್ವಜ್ಞ ಅವರ ಭಾವ ಚಿತ್ರದ ಮೆರವಣಿಗೆಯು ಬೆಳಗ್ಗೆ ೯.೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಕಿತ್ತೂರು ಚನ್ನಮ್ಮ ವೃತ್ತ, ಜಿಲ್ಲಾ ಆಸ್ಪತ್ರೆ ರಸ್ತೆ, ಬಿ.ಡಿ. ಜತ್ತಿ ಬಿಎಡ್ ಕಾಲೇಜು ಮಾರ್ಗವಾಗಿ ಕುಮಾರ ಗಂಧರ್ವ ಕಲಾ ಮಂದಿರ ಸೇರುವುದು.

Related Articles

Back to top button