Latest

ಕಾಲೇಜು ವಸತಿ ನಿಲಯದಲ್ಲೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಸರ್ಕಾರಿ ಕೃಷಿ ಮಹಾವಿದ್ಯಾಲಯದ ವಸತಿ ನಿಲಯದಲ್ಲಿಯೇ ವಿದ್ಯಾರ್ಹಿನಿಯೊಬ್ಬರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಕಿಗೆ ಬಂದಿದೆ.

ಬಿಎಸ್ಸಿ ಅಗ್ರಿಕಲ್ಚರ್ ಓದುತ್ತಿದ್ದ ವಿದ್ಯಾರ್ಥಿನಿ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಕುರುಬೂರು ಕೃಷಿ ಮಹಾವಿದ್ಯಾಲಯದ ವಸತಿ ನಿಲಯದಲ್ಲಿ ಈ ದುರಂತ ಸಂಭವಿಸಿದೆ.

Home add -Advt

ಆತ್ಮಹತ್ಯೆಗೂ ಮುನ್ನ ಪವಿತ್ರಾ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಅಪರಿಚಿತ ಯುವಕನ ಮೊಬೈಲ್ ನಂಬರ್ ಮೂಲಕ ಆತನೊಂದಿಗೆ ಆರಂಭವಾದ ಪರಿಚಯ, ಸ್ನೇಹ, ಪ್ರೇಮಕ್ಕೆ ತಿರುಗಿದೆ. ತುಂಬಾ ಒಳ್ಳೆಯವನಂತೆ ಕಂಡಿದ್ದ ಯುವಕ ಪರಿಚಯವಾದ ಕೆಲವೇ ದಿನಗಳಲ್ಲಿ ರೂಮಿಗೆ ಕರೆದಿದ್ದ. ಆತ ಒಳ್ಳೆಯವನಲ್ಲ ಎಂದು ಗೊತ್ತಾಗಿದೆ. ಇದರಿಂದ ಬೇಸರವಾಗಿ ಆತನ ಜತೆ ಮಾತನ್ನೇ ನಿಲ್ಲಿಸಿದ್ದೆ. ಮತ್ತೆ ಮತ್ತೆ ಫೋನ್ ಕಾಲ್, ಮೆಸೇಜ್ ಮಾಡಿ ಮತಾನಾಡಲು ಶುರುಮಾಡಿದ್ದ. ಮತ್ತೆ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಈ ವಿಷಯ ಯುವಕನ ಮನೆಯಲ್ಲಿ ಗೊತ್ತಾಗಿ ಯುವಕನ ಅಕ್ಕ ನನಗೆ ಕರೆ ಮಾಡಿ ಬೈದಿದ್ದಳು. ಬಳಿಕ ನಾವಿಬ್ಬರೂ ದೂರವಾಗೋಣ ಎಂದು ತೀರ್ಮಾನಿಸಿದ್ದೆವು ಎಂದು ಬರೆದಿದ್ದಾಳೆ ಎನ್ನಲಾಗಿದೆ.

ಸಾವಿಗೂ ಮುನ್ನ ಪವಿತ್ರಾ ಡೆತ್ ನೋ ಜತೆ ವಿಡಿಯೋ ಕೂಡ ಮಾಡಿಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ

Related Articles

Back to top button