Kannada NewsKarnataka NewsLatest

*ಧರ್ಮಸ್ಥಳ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ಎಂಟ್ರಿ: ನಾಲ್ವರ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಮೂಲದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಟ್ರಿ ಕೊಟ್ಟಿದ್ದಾರೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಹೇಶ್ ತಿಮರೋಡಿ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

Home add -Advt

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿದ ಸ್ನೇಹಮಯಿ ಕೃಷ್ಣ, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದಲ್ಲಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಯೂಟ್ಯೂಬರ್ ಸಮೀರ್ ಎಂಡಿ ಹಾಗೂ ಸುಜಾತಾ ಭಟ್ ವಿರುದ್ಧ ದೂರು ದಾಖಲಿಸಿದ್ದಾರೆ.

ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಧರ್ಮಸ್ಥಳ ಠಾಣೆ ಪೊಲೀಸರು ದೂರು ಸ್ವೀಕರಿಸಿರುವುದಾಗಿ ಹಿಂಬರಹ ಕೊಟ್ಟಿದ್ದಾರೆ.

Related Articles

Back to top button