Kannada NewsKarnataka NewsLatest

*ಅಪ್ಪ-ಅಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಮಗ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆತ್ತ ತಂದೆ-ತಾಯಿಯನ್ನೇ ಮಗನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘೋರ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

ಭಾಸ್ಕರ್ ಹಾಗೂ ಶಾಂತಾ ದಂಪತಿ ಕೊಲೆಯಾದವರು. ಶರತ್ ತಂದೆ-ತಾಯಿಯನ್ನೇ ಕೊಲೆಗೈದ ಮಗ. ಮಾರಕಾಸ್ತ್ರಗಳಿಂದ ಹೊಡೆದು ತಂದೆ-ತಾಯಿ ಇಬ್ಬರನ್ನು ಶರತ್ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಶಾಂತಾ ಇತ್ತೀಚೆಗೆ ಕೇಂದ್ರ ಸರ್ಕಾರದ ನೌಕರಿಯಿಂದ ನಿವೃತ್ತಿಯಾಗಿದ್ದರು. ಪತಿ ಭಾಸ್ಕರ್ ಖಾಸಗಿ ಕ್ಯಾಂಟೀನ್ ನಲ್ಲಿ ಕ್ಯಾಶಿಯರ್ ಆಗಿದ್ದರು. ಪತಿ-ಪತ್ನಿ ಇಬ್ಬರೂ ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಓರ್ವ ಮಗ ಕೆಲಸಕ್ಕೆ ಹೋಗುತ್ತಿದ್ದ. ಇನ್ನೋರ್ವ ಮಗ ಆರೋಪಿ ಶರತ್ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದ.

ಕುಡಿದು ಬಂದು ನಿನ್ನೆ ತಂದೆ-ತಾಯಿ ಜೊತೆ ಶರತ್ ಗಲಾಟೆ ಮಾಡುತ್ತಿದ್ದ. ಇದೇ ವೇಳೆ ತಂದೆ-ತಾಯಿ ಇಬ್ಬರಿಗೂ ರಾಡ್ ನಿಂದ ಹೊಡೆದು ಕೊಲೆಗೈದಿರುವ ಶರತ್ ಬಳಿಕ ಮನೆ ಲಾಕ್ ಮಾಡಿ ಪರಾರಿಯಾಗಿದ್ದಾನೆ. ಹಿರಿಯ ಮಗ ತಂದೆ -ತಾಯಿಗೆ ಇಂದು ಕರೆ ಮಾಡಿದ್ದಾನೆ. ಆದರೆ ಫೋನ್ ರಿಸೀವ್ ಮಾಡಿಲ್ಲ. ಪಕ್ಕದ ಮನೆಯವರಿಗೆ ಕರೆ ಮಾಡಿ ವಿಚಾರಿಸಿದ್ದಾನೆ ಈ ವೇಳೆ ಪಕ್ಕದ ಮನೆಯರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಕೋಡಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button