Kannada NewsKarnataka NewsLatest
*ಸೌಜನ್ಯ ತಾಯಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅ.27ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ಮಹೇಶ್ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ ಹಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆ ಎಂದು ಕರೆ ನೀಡಲಾಗಿತ್ತು. ಪೊಲೀಸರು ಅನುಮತಿ ನೀಡದಿದ್ದರೂ ಜನರನ್ನು ಸೇರಿಸಲಾಗಿತ್ತು. ಈ ಮೂಲಕ ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.




