Election NewsKannada NewsKarnataka NewsNationalPolitics

*ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಮೈತ್ರಿ ಅಭ್ಯರ್ಥಿಗೆ ಭರ್ಜರಿ ಗೆಲುವು*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲನುಭವಿಸಿದ್ದು,  ಮೈತ್ರಿ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ.

ಮೈತ್ರಿ ಅಭ್ಯರ್ಥಿ ವಿವೇಕಾನಂದ 4,622 ಮತಗಳ ಭಾರಿ ಅಂತರದಿಂದ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಸೋತಿದ್ದಾರೆ. ವಾಟಾಳ್ ನಾಗರಾಜ್‌ಗೆ ಕೇವಲ 84 ಮತಗಳು ಸಿಕ್ಕಿವೆ. 1,049 ಮತಗಳು ಅಸಿಂಧುವಾಗಿದೆ.  

ಸತತ ನಾಲ್ಕು ಬಾರಿ ಮರಿತಿಬ್ಬೇಗೌಡ ಗೆದ್ದಿದ್ದರು. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದು ನಂತರದ ದಿನಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button