
ಪ್ರಗತಿವಾಹಿನಿ ಸುದ್ದಿ: ಹಲವು ವಿಷಯಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್, ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಭೀಕರ ಬರಗಾಲ ಎದುರಾಗಿದೆ.ಈ ವರ್ಷ 150 ವರ್ಷಗಳಲ್ಲೇ ಕಂಡಿರಿಯದ ಬರಗಾಲವಿದೆ. ಸೂಪರ್ ಎಲ್ ನಿನೋ ಪರಿಣಾಮ ಈ ಸ್ಥಿತಿ ಇದ್ದು, ಇದರ ನೇರ ಪರಿಣಾಮ ರೈತರು, ಆರ್ಥಿಕತೆ. ಆಹಾರದ ಮೇಲೆ ಬೀಳುತ್ತಿದೆ. ಇವುಗಳನ್ನು ಚರ್ಚಿಸಲು ಸೆ.21ರಿಂದ ಮೂರು ದಿನ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದರು.
ಕಸ್ತೂರಿ ರಂಗನ್ ವರದಿ ಈಗ ಮತ್ತೆ ಚರ್ಚೆಗೆ ಬಂದಿದ್ದು, ಈಗಾಗಲೇ ನಾಲ್ಕೈದು ಬಾರಿ ಇದನ್ನು ತಿರಸ್ಕರಿಸಿದ್ದೇವೆ. ಆದರೂ ಇನ್ನು ಅದರ ಬಗ್ಗೆ ಚರ್ಚೆಗಳು ಆಗುತ್ತಿವೆ. ಈ ಬಗ್ಗೆಯೂ ಅಧಿವೇಶನದಲ್ಲಿ ಚರ್ಚೆ ಆಗಬೇಕಿದೆ. ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸೆ.21, 22 ಹಾಗೂ 23ರಂದು ವಿಶೇಷ ಅಧಿವೇಶನ ನಡೆಸಲಾಗುವುದು ಎಂದರು.


