Latest

ಡಿಸಿಎಂ ಮಾಡೆಂದು ದುರ್ಗಾದೇವಿಗೆ ಪತ್ರ ಬರೆದ ಆರೋಗ್ಯ ಸಚಿವ

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಆರೋಗ್ಯ ಸಚಿವ ಶ್ರೀರಾಮುಲು ’ತನ್ನನ್ನು ರಾಜ್ಯದ ಉಪಮುಖ್ಯಮಂತ್ರಿಯನ್ನಾಗಿ ಮಾಡು’ ಎಂದು ವಡಗೇರಾ ಗೋನಾಲ ಗಡೇ ದುರ್ಗಾದೇವಿಗೆ ಪತ್ರ ಬರೆದಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮಕ್ಕಾಗಿ ಯಾದಗಿರಿ ಜಿಲ್ಲೆಗೆ ಆಗಮಿಸಿದ ಸಚಿವ ಶ್ರೀರಾಮುಲು, ಗೋನಾಲ ಗಡೇ ದುರ್ಗಾದೇವಿ ದರ್ಶನ ಪಡೆದರು. ಈ ವೇಳೆ ತನ್ನನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಇಂಗ್ಲೀಷಿನಲ್ಲಿ ಪತ್ರ ಬರೆದಿದ್ದು, ಪೂಜಾರಿ ಮಾರ್ಗದರ್ಶನದಂತೆ ಗರ್ಭಗುಡಿಯೊಳಗೆ ತೆರಳಿ ತಮ್ಮ ಪತ್ರವನ್ನು ದೇವಿಯ ಪಾದದ ಬಳಿ ಇಟ್ಟಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ನನ್ನ ಮನಸ್ಸಿನಲ್ಲಿರುವುದನ್ನು ನಾನು ದೇವರ ಮುಂದೆ ಪ್ರಾರ್ಥಿಸಿ ಪತ್ರದಲ್ಲಿ ಬರೆದಿದ್ದೇನೆ. ಮನಸ್ಸಿನಲ್ಲಿ ಹೇಳುವುದು, ಪತ್ರದಲ್ಲಿ ಬರೆಯುದೆಲ್ಲವೂ ಒಂದೇ ಇರುತ್ತದೆ. ನನ್ನನ್ನು ಡಿಸಿಎಂ ಮಾಡುವುದು ಬಿಡುವುದು ಸಿಎಂ ವಿವೇಚನೆಗೆ ಬಿಟ್ಟದ್ದು ಎಂದು ಹೇಳಿದರು.

ಈ ಹಿಂದೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೂಡ ತಾವು ಕೆಪಿಸಿಸಿ ಅಧ್ಯಕ್ಷರಾಗಬೇಕು ಎಂದು ಗಡೇ ದುರ್ಗಾದೇವಿಗೆ ಪತ್ರ ಬರೆದಿದ್ದರು. ಅದರಂತೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ ಎಂಬುದು ಜನರ ನಂಬಿಕೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button