Kannada NewsKarnataka NewsLatest

*ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಇದೇ ತಿಂಗಳು 26 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗಿದ್ದ ಬೆಂಗಳೂರಿನ‌ ಚಿಕ್ಕಬಾಣಾವರದ ಅಬ್ಬಿಗೆರೆ ಕಾಲೋನಿಯ ಶರತ್ ಕುಮಾರ್ (16) ನಾಪತ್ತೆಯಾಗಿರುವ ವಿದ್ಯಾರ್ಥಿ.

ಪರೀಕ್ಷೆ ಬರೆಯಲೆಂದು ಹೋಗಿರುವ ವಿದ್ಯಾರ್ಥಿ ಮೂರು ದಿನಗಳಿಂದ ಮನೆಗೆ ಮರಳಿಲ್ಲ. ಆತಂಕಗೊಂಡಿರುವ ಪೋಷಕರು ಎಲ್ಲಾ ಕಡೆ ಹುಡುಕಾಟ ನೆಡೆಸಿದ್ದಾರೆ ಆದಾಗ್ಯೂ ಮಗನ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಶರತ್ ಕುಮಾರ್ ತಂದೆ ಸುರೇಶ್ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related Articles

Back to top button